
ಹೊಸನಗರ: ಶಾಸಕ ಗೋಪಾಲ ಕೃಷ್ಣ ಬೇಳೂರು ಅವರ ಅಭಿವೃದ್ಧಿ ಪರ ಚಿಂತನೆಗಳು ಹಾಗೂ ಕ್ಷೇತ್ರದ ಪ್ರಗತಿಗಾಗಿ ಅವರು ನಡೆಸುತ್ತಿರುವ ಕಾರ್ಯಗಳನ್ನು ಬೆಂಬಲಿಸಿ ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ನ ಪ್ರಮುಖ ನಾಯಕರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಶಾಸಕರ ಗೃಹ ಕಚೇರಿಯಲ್ಲಿ ಎಂ. ಗುಡ್ಡೆಕೊಪ್ಪ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ನಿಕಟಪೂರ್ವ ಸದಸ್ಯರಾದ ಕಾಲ್ ಸಸಿ ಸತೀಶ್ ಮತ್ತು ಅವರ ಬೆಂಬಲಿಗರನ್ನು ಶಾಸಕರು ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಗೋಪಾಲ ಕೃಷ್ಣ ಬೇಳೂರು ಅವರು, “ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಮೂಲಸೌಕರ್ಯಗಳ ಅಭಿವೃದ್ಧಿಗೆ ನಾವು ಆದ್ಯತೆ ನೀಡುತ್ತಿದ್ದೇವೆ. ರಾಜಕೀಯಕ್ಕಿಂತ ಹೆಚ್ಚಾಗಿ ಜನರ ಸೇವೆ ಮತ್ತು ಕ್ಷೇತ್ರದ ಪ್ರಗತಿಯೇ ನಮ್ಮ ಗುರಿ. ಎಂ. ಗುಡ್ಡೆಕೊಪ್ಪ ಭಾಗದ ಸಕ್ರಿಯ ಮುಖಂಡರು ಇಂದು ನಮ್ಮೊಂದಿಗೆ ಕೈಜೋಡಿಸಿರುವುದು ಸಂತಸ ತಂದಿದೆ. ಮುಂಬರುವ ದಿನಗಳಲ್ಲಿ ಈ ಭಾಗದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ವೇಗ ನೀಡಲಾಗುವುದು ಮತ್ತು ಹೊಸದಾಗಿ ಬಂದಿರುವ ನಾಯಕರನ್ನು ವಿಶ್ವಾಸಕ್ಕೆ ಪಡೆದು ಪಕ್ಷ ಸಂಘಟನೆ ಮಾಡಲಾಗುವುದು,” ಎಂದು ತಿಳಿಸಿದರು.
ಸೇರ್ಪಡೆಗೊಂಡ ಕಾಲ್ ಸಸಿ ಸತೀಶ್ ಅವರು ಮಾತನಾಡಿ, ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ರೀತಿ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಅವರು ನೀಡುತ್ತಿರುವ ಒತ್ತು ಕಂಡು ನಾವು ಕಾಂಗ್ರೆಸ್ ಸೇರುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಚಂದ್ರಶೇಖರ್, ರಾಮಕೃಷ್ಣ , ಬಾಬಣ್ಣ ಮಾವಿನ ಕೊಪ್ಪ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು
ಬರಹ: ತಂಡ, vishwachetana.com









